Flash News
Saturday, February 14, 2026
Logo Flash News
Saturday, February 14, 2026
Logo
ಎಸಿಎಫ್ ಮದನ್ ನಾಯಕ ಹತ್ಯೆ: ಆರೋಪಿತರಿಗೆ ಶಿಕ್ಷೆ

ಎಸಿಎಫ್ ಮದನ್ ನಾಯಕ ಹತ್ಯೆ: ಆರೋಪಿತರಿಗೆ ಶಿಕ್ಷೆ

January 09, 2026   |   Flash News

ಶಿರಸಿ: ದಾಂಡೇಲಿ ಅರಣ್ಯ ಇಲಾಖೆಯ ಎಸಿಎಫ್ ಮದನ್ ನಾಯಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲ್ಲಾಪುರ ಸಂಚಾರಿ ನ್ಯಾಯಾಲಯದಲ್ಲಿ ಶಿಕ್ಷೆ ಪ್ರಕಟಿಸಿದೆ. ಪ್ರಕರಣದ ಮೂರನೇ ಆರೋಪಿ ಪ್ರಶಾಂತ್ ರಾಮು ಲಂಬಾಣಿಗೆ 10 ವರ್ಷ ಕಾರಾಗೃಹ ವಾಸ 11 ಸಾವಿರ ದಂಡ 50 ಸಾವಿರ ಮೃತರ ಅವಲಂಬಿತರಿಗೆ ಪರಿಹಾರ ನೀಡುವಂತೆ ಆದೇಶ ನೀಡಿದೆ. ಉಳಿದ ಆರೋಪಿಗಳಿಗೆ ಒಂದುಸಾವಿರ ದಂಡ ವಿಧಿಸಿದ್ದು 1 ರಿಂದ 4,6,8,10 ನೇ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಿದೆ. ಒಟ್ಟು 12 ಜನ ಆರೋಪಿಗಳಲ್ಲಿ ಎಂಟು ಜನರಿಗೆ ಶಿಕ್ಷೆ ಪ್ರಕಟಗೊಂಡಿದೆ. 2012  ಮೇ 6 ರಂದು ದಾಂಡೇಲಿ ಮೊಸಳೆ ಪಾರ್ಕ ನಲ್ಲಿ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರಿಗೆ ಮೊಸಳೆಗೆ ಮಾಂಸ ಹಾಕದಂತೆ ಮದನ್ ನಾಯಕ ತಿಳಿ ಹೇಳಿದ್ದರು. ಅದಕ್ಕೆ ಅವರ ಮೇಲೆ ಪ್ರವಾಸಿಗ ಮಹಿಳೆಯರೂ ಸೇರಿ ಮಾರಣಾಂತಿಕ ಹಲ್ಲೆ ನಡೆಸಿದ್ದರು. ತಲೆಗೆ ಗಂಭೀರ ಗಾಯವಾಗಿ ಮೇ 8 ರಂದು ಎಸಿಎಫ್ ಮದನ್ ನಾಯಕ ಮೃತ ಪಟ್ಟಿದ್ದರು. ಪ್ರಕರಣವನ್ನು ಅಂದಿನ ಸರ್ಕಾರ ಸಿಐಡಿಗೆ ವಹಿಸಿತ್ತು. ಮದನ್ ನಾಯಕ ಪತ್ನಿ ಸುಮತಿ ದೂರು ಹಿನ್ನೆಲೆಯಲ್ಲಿ ತನಿಖೆ ನಡೆದು ಶಿಕ್ಷೆ ಪ್ರಕಟವಾಗಿದೆ. ಶಿರಸಿಯ ಜಿಲ್ಲಾ ಸತ್ರ ನ್ಯಾಯಾಲಯದ ಕಿರಣ್ ಕಿಣಿ ನ್ಯಾಯಾಧೀಶರಿಂದ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರ ರಾಜೇಶ್ ಮಳಗೀಕರ್ ವಾದ ಮಂಡಿಸಿದ್ದರು.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.