ಶಿರಸಿ - ಹಾವೇರಿ ರಾಷ್ಟ್ರೀಯ ಹೆದ್ದಾರಿ ವಿಳಂಬ ಹಿನ್ನೆಲೆ ಬಿಸಲಕೊಪ್ಪದಲ್ಲಿ ಸಾರ್ವಜನಿಕರಿಂದ ಪ್ರತಿಭಟನೆ ನಡೆಯುತ್ತಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಬಿಸಲಕೊಪ್ಪ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಳಂಬ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ 6 ತಿಂಗಳುಗಳಿಂದ ರಸ್ತೆ ಅವ್ಯವಸ್ಥೆಯಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ರೋಸಿ ಹೋಗಿದ್ದಾರೆ. ಅಮ್ಮಾಪುರ ಕನ್ಸ್ಟ್ರಕ್ಷನ್ ಕಂಪನಿ ರಸ್ತೆ ಕಾಮಗಾರಿ ಗುತ್ತಿಗೆ ಪಡೆದಿತ್ತು. 8 ಕಿಲೋಮೀಟರ್ ರಸ್ತೆಯನ್ನು ಸಂಪೂರ್ಣ ಅಗೆದುಹಾಕಲಾಗಿದೆ. ಹಾಗೆ ಬಿಟ್ಟಿದ್ದರಿಂದ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಜನರು ತೊಂದರೆ ಅನುಭವಿಸುವಾಂತಾಗಿದೆ. ಸಂಪೂರ್ಣ ರಸ್ತೆ ಬಂದ್ ಮಾಡಿ ಸಾರ್ವಜನಿಕರ ಆಕ್ರೋಶ ಹೊರಹಾಕುತ್ತಿದ್ದು ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದೆ.