ಅಂಕೋಲಾ: ಪಟ್ಟಣದ ವೆಂಕಟರಮಣ ದೇವಸ್ಥಾನದ ಸಾರ್ವಜನಿಕರ ರಸ್ತೆ ಬದಿಯಲ್ಲಿ ಭಿಕ್ಷಾಟನೆಯಲ್ಲಿ ತೊಡಗಿಕೊಂಡಿದ್ದ ವ್ಯಕ್ತಿಯೊಬ್ಬರ ಮೇಲೆ ಕರ್ನಾಟಕ ಭಿಕ್ಷಾಟನಾ ಅಧಿನಿಯಮ 1975ರ ಅನ್ವಯ ಕಾನೂನು ಕ್ರಮ ಜರುಗಿಸುವಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ ಕರ್ನಾಟಕ ಬಿಕ್ಷಾಟನಾ ಅಧಿನಿಯಮ 1975ರ ಕಲಂ 11ನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಸಂಬಂಧ ಬಿಕ್ಷಾಟನೆ ವಿರುದ್ಧ ವಿಶೇಷ ಕಾರ್ಯಚರಣೆ ನಡೆಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಸೂಚನೆಯಂತೆ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ಇತರೆ ಪಂಚರನ್ನು ಸೇರಿಸಿಕೊಂಡು ಪೊಲೀಸ್ ಇಲಾಖೆಯ ವಾಹನದಲ್ಲಿ ಸಂಚರಣೆ ಮಾಡುತ್ತಿರುವಾಗ ಕಂಡು ಬಂದ ಭಿಕ್ಷುಕರೋರ್ವರ ಮೇಲೆ ಪಿಎಸ್ಐ ಉದ್ದಪ್ಪ ಧರೆಪ್ಪನವರ ಪ್ರಕರಣ ದಾಖಲಿಸಿದ್ದಾರೆ.